ಮದ್ಯದ ಅಮಲಿನಲ್ಲಿ ಸಂಬಂಧಿಯ ಕೊಲೆ: ಇಬ್ಬರ ಬಂಧನ

Update: 2019-04-17 15:56 GMT

ಬೆಂಗಳೂರು, ಎ.17: ಮದ್ಯದ ಅಮಲಿನಲ್ಲಿ ಸಂಬಂಧಿನೊರ್ವನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಇಲ್ಲಿನ ಕೆ.ಆರ್.ಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇಮ್ರಾನ್ ಹಾಗೂ ಸಾಹೀಲ್ ಬಂಧಿತ ಆರೋಪಿಗಳಾಗಿದ್ದು, ಅಪ್ರೋಝ್ ಪಾಷಾ ಎಂಬಾತ ಕೊಲೆಯಾಗಿರುವ ವ್ಯಕ್ತಿ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಜೆಸಿ ಲೇಔಟ್‌ನ ದೇವಸಂದ್ರ ನಿವಾಸಿ ಇಮ್ರಾನ್, ಅಪ್ರೋಝ್ ಎಂಬುವರು ಸಂಬಂಧಿಕರಾಗಿದ್ದು, ಎ.16ರಂದು ಮದ್ಯದ ಅಮಲಿನಲ್ಲಿ ಜಗಳ ನಡೆದಿತ್ತು. ಈ ವೇಳೆ ಮಾರಕಾಸ್ತ್ರಗಳಿಂದ ಅಪ್ರೋಝ್ ಪಾಷಾ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ರೋಝ್ ಪಾಷಾ ಮೃತಪಟ್ಟಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು, ಇಮ್ರಾನ್ ಹಾಗೂ ಸಾಹೀಲ್ ಎಂಬುವರನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಅಬ್ದುಲ್ ಅಹದ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News