ಪುರುಷೋತ್ತಮ ಪೂಂಜರಿಗೆ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ

Update: 2019-04-17 16:38 GMT

ಉಡುಪಿ, ಎ.17: ಯಕ್ಷಗಾನ ಕಲಾರಂಗ ಉಡುಪಿ ಯಕ್ಷಗಾನ ಕ್ಷೇತ್ರದ ವಿದ್ವಾಂಸರಿಗೆ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ನೀಡುವ ಈ ಬಾರಿಯ ಪ್ರಶಸ್ತಿಗೆ ಹಿರಿಯ ಭಾಗವತ, ಪ್ರಸಂಗಕರ್ತ, ರಂಗ ನಿರ್ದೇಶಕ ಬೊಟ್ಟಿಗೆರೆ ಪುರುಷೋತ್ತಮ ಪೂಂಜ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಮೇ12ರ ರವಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಂಪನ್ನಗೊಳ್ಳಲಿದೆ. ಪ್ರಶಸ್ತಿಯು 40,000 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸಮ್ಮಾನ ಪರಿಕರಗಳನ್ನು ಒಳಗೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News