ಸಿಎಂ ಕುಮಾರಸ್ವಾಮಿ ಕುಟುಂಬ ಕೇತಗಾನ ಹಳ್ಳಿಯಲ್ಲಿ ಮತದಾನ
Update: 2019-04-18 05:11 GMT
ಬೆಂಗಳೂರು, ಎ.18: ಕರ್ನಾಟಕದಲ್ಲಿ ಲೋಕಸಭೆಯ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಗುರುವಾರ ಬೆಳಗ್ಗೆ ಕುಟುಂಬ ಸಮೇತರಾಗಿ ಆಗಮಿಸಿ ಬೆಂಗಳೂರು ಗ್ರಾಮಂತರ ವ್ಯಾಪ್ತಿಯ ಕೇತಗಾನ ಹಳ್ಳಿಯಲ್ಲಿ ಮತದಾನ ಮಾಡಿದರು.
ಸಿಎಂ ಕುಮಾರಸ್ವಾಮಿ, ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ, ಮಂಡ್ಯ ಕ್ಷೇತ್ರದ ಜೆಡಿಎಸ್ –ಕಾಂಗ್ರೆಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಕರ್ನಾಟಕದಲ್ಲಿ ಮೊತಲ ಹಂತದ ಮತದಾನ ನಡೆಯುತ್ತಿರುವ 14 ಕ್ಷೇತ್ರಗಳ ಪೈಕಿ 10ರಿಂದ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದರು.