ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಮಿಥುನ್ ರೈ

Update: 2019-04-18 17:44 GMT

ಮಂಗಳೂರು, ಎ.18: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದಲ್ಲದೆ, ತನಗೆ ಮತ ನೀಡಿ ಆಶೀರ್ವದಿಸಿದ ಎಲ್ಲರಿಗೂ ಆಭಾರಿಯಾಗಿರುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ.

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಮತದಾರರು ತನ್ನ ಅಭ್ಯರ್ಥಿತನ ಮೇಲೆ ವಿಶ್ವಾಸ ವಿರಿಸಿ ಮತ ಚಲಾಯಿಸಿರುವುದು ಸಂತಸ ತಂದಿದೆ.

ಶಾಂತಿಯುತ ಮತ್ತು ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸಲು ಶ್ರಮಿಸಿದ ಅಧಿಕಾರಿ ವರ್ಗಕ್ಕೂ, ಅದೇ ರೀತಿಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸಿಬ್ಬಂದಿಗೂ ಮಿಥುನ್ ರೈ ಕೃತಜ್ಞತೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News