ಮಹಿಳಾ ವಿರೋಧಿಗಳಿಗೆ ಗೆಲ್ಲಲು ಅವಕಾಶ ನೀಡಬೇಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2019-04-18 18:38 GMT

ಬೆಂಗಳೂರು, ಎ. 18: ‘ಯಾವುದೇ ಕಾರಣಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ, ಕೊಡಗು-ಮೈಸೂರು ಕ್ಷೇತ್ರದ ಪ್ರತಾಪ್ ಸಿಂಹ ಹಾಗೂ ದಕ್ಷಿಣ ಕನ್ನಡ ಕ್ಷೇತ್ರದ ನಳೀನ್ ಕುಮಾರ್ ಕಟೀಲ್ ಸೇರಿ ಮೂವರು ಮಹಿಳಾ ವಿರೋಧಿಗಳಿಗೆ ಗೆಲ್ಲಲು ಅವಕಾಶ ನೀಡಬೇಡಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

‘ಬಿಜೆಪಿ ಅಭ್ಯರ್ಥಿಗಳೆಲ್ಲರನ್ನೂ ಸೋಲಿಸಿ, ಈ ಮಹಿಳಾ ವಿರೋಧಿ ಬಿಜೆಪಿ ಅಭ್ಯರ್ಥಿಗಳನ್ನು ಸೋತು ಸುಣ್ಣವಾಗುವಂತೆ ಮಾಡಿ’ ಎಂದು ಸಿದ್ದರಾಮಯ್ಯ ಮೂರು ಮಂದಿ ಅಭ್ಯರ್ಥಿಗಳ ಫೋಟೋಗಳೊಂದಿಗೆ ಟ್ವಿಟ್ ಮಾಡಿದ್ದು, ಬಿಜೆಪಿಯನ್ನು ಸೋಲಿಸಿ ಎಂದು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News