ಇಂಧನ ತೈಲ ಸಾಗಾಟದ ಟ್ಯಾಂಕರ್ ಸೇತುವೆಗೆ ಢಿಕ್ಕಿ; ಚಾಲಕ ಮೃತ್ಯು

Update: 2019-04-20 11:21 GMT

ಚಿಕ್ಕಮಗಳೂರು, ಎ.20: ಇಂಧನ ಸಾಗಾಟದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿಸೇತುಗೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಕಡೂರು ತಾಲೂಕಿನ ಬೀರೂರು ಸಮೀಪದಲ್ಲಿ ವರದಿಯಾಗಿದೆ.

ಮೃತರನ್ನು ಹಾಸನ ಜಿಲ್ಲೆಯ ಲಿಂಗರಾಜು(50) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಹಾಸನದಿಂದ ದಾವಣಗೆರೆ ಪೆಟ್ರೋಲ್ ಕೊಂಡೊಯ್ದಿದ್ದ ಟ್ಯಾಂಕರ್ ದಾವಣಗೆರೆಯಲ್ಲಿ ಪೆಟ್ರೋಲ್ ಅನ್‌ಲೋಡ್ ಮಾಡಿ ಶನಿವಾರ ಬೆಳಗ್ಗೆ ಬೀರೂರಿನತ್ತ ಬರುತ್ತಿತ್ತು. ಈ ವೇಳೆ ಸಮೀಪದ ದೋಗೆಹಳ್ಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಸೇತುವೆಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಟ್ಯಾಂಕರ್ ಪಲ್ಟಿಯಾಗಿದ್ದು, ಅದರಡಿಯಲ್ಲಿ ಸಿಲುಕಿದ ಚಾಲಕ ಲಿಂಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ಟ್ಯಾಂಕರ್ ಅನ್ನು ಮೇಲೆತ್ತಿ ಚಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಇದ್ದು, ಟ್ಯಾಂಕರ್ ಅದಕ್ಕೆ ಢಿಕ್ಕಿ ಹೊಡೆದಿದ್ದಾರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಘಟನೆ ಸಂಬಂಧ ಬೀರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News