ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-04-20 16:17 GMT

ಶಿರ್ವ, ಎ.20: ವೈಯಕ್ತಿಕ ಕಾರಣದಿಂದ ಮನನೊಂದ ಕುತ್ಯಾರು ಗ್ರಾಮದ ಕೆಂಜದಡ್ಡು ನಿವಾಸಿ ಪ್ರಸಾದ್ ಆಚಾರ್ಯ(36) ಎಂಬವರು ಎ.19ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಬಸ್ರೂರು ಗ್ರಾಮದ ಮೂಡ್ಕೇರಿಯ ಶೇಷಿ ಪೂಜಾರ್ತಿ ಎಂಬವರ ಮಗ ರಾಘವೇಂದ್ರ(29) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಎ.19ರಂದು ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News