ಕಲಬುರಗಿ ಪಾಲಿಗೆ ಖರ್ಗೆ, ಧರಂ ನಿಜವಾದ ಜೋಡೆತ್ತುಗಳು: ಸಚಿವ ಪ್ರಿಯಾಂಕ್ ಖರ್ಗೆ

Update: 2019-04-20 16:23 GMT

ಯಾದಗಿರಿ, ಎ. 20: ಕಲಬುರಗಿ ಲೋಕಸಭಾ ಕ್ಷೇತ್ರದ ಪಾಲಿಗೆ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ನಿಜವಾದ ಜೋಡೆತ್ತುಗಳು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಏರ್ಪಡಿಸಿದ್ದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಲಿಕಯ್ಯ ಗುತ್ತೇದಾರ್ ಹಾಗೂ ಬಾಬುರಾವ್ ಚಿಂಚನಸೂರ ಮಾರಾಟವಾದ ಕಳ್ಳೆತ್ತುಗಳು. ಇಬ್ಬರೂ ಧಿಮಾಕಿನಿಂದ ಸೋತಿದ್ದಾರೆ ಎಂದು ಲೇವಡಿ ಮಾಡಿದರು.

ಮಾಲಿಕಯ್ಯ ಗುತ್ತೇದಾರ್ ಹಾಗೂ ಚಿಂಚನಸೂರು ಇಬ್ಬರು ಸುಳ್ಳಿನ ಸರದಾರರು. ಚಿಂಚನಸೂರು ‘ಗಡಿನಾಡು ಪ್ರಾಧಿಕಾರದ ಅಧ್ಯಕ್ಷರಾಗಲು ನಮ್ಮ ಮೇಲೆ ಒತ್ತಡ ಹೇರಿದ್ದರು. ಸ್ಥಾನ ನೀಡದಿದ್ದರೆ ವಿಷ ಕುಡಿಯುವ ಬೆದರಿಕೆ ಹಾಕಿದ್ದರು ಎಂದರು.

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಮೇಶ್ ಜಾಧವ್ ಉಂಡ ಮನೆಗೆ ದ್ರೋಹ ಮಾಡಿದ್ದಾರೆ. ಇದೀಗ ಬಿಜೆಪಿಯೂ ತನಗೆ ಹೊಂದಾಣಿಕೆ ಆಗುತ್ತಿಲ್ಲ ಎಂದು ಒದ್ದಾಡುತ್ತಿದ್ದಾರೆಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News