ದೇಶದ ಮತದಾರರು ಭ್ರಮನಿರಸನಗೊಂಡಿದ್ದಾರೆ: ಸಚಿವ ಡಿಕೆಶಿ

Update: 2019-04-20 17:28 GMT

ಶಿವಮೊಗ್ಗ,ಎ.20: ಪ್ರಸ್ತುತ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯದಲ್ಲಿ ಮೈತ್ರಿಕೂಟ ಮುನ್ನಡೆ ಸಾಧಿಸುವುದು ನಿಶ್ಚಿತವಾಗಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಂಬ್ಳೆಬೈಲು ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೈತ್ರಿಕೂಟ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆಯನ್ನು ಆ ಪಕ್ಷದ ಮುಖಂಡರು ನಡೆಸುತ್ತಿಲ್ಲ. ಇದಕ್ಕೆ ಬದಲಾಗಿ ಮೋದಿಗೆ ಮತ ಹಾಕಿ ಎಂದು ಕೇಳುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಹಾಗಾದರೆ ಅವರ ಸಾಧನೆ ಏನು? ಎಂದು ತರಾಟೆಗೆ ತೆಗೆದುಕೊಂಡರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಛೇ ದಿನ್ ಬರಲಿದೆ ಎಂದು ಮೋದಿ ಹೇಳಿದ್ದರು. ಆದರೆ ಕಳೆದ 5 ವರ್ಷದ ಆಡಳಿತಾವದಿಯಲ್ಲಿ ಒಳ್ಳೆಯ ದಿನಗಳೇ ಬರಲಿಲ್ಲ. ಇದರಿಂದ ದೇಶದ ಮತದಾರರು ಭ್ರಮನಿರಸನಗೊಂಡಿದ್ದಾರೆ. ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News