ಬಿಜೆಪಿ ಶಾಸಕನ ಮನೆಯಲ್ಲಿ ಕಳವು

Update: 2019-04-20 17:53 GMT

ಚಿತ್ರದುರ್ಗ, ಎ.20: ಬಿಜೆಪಿ ಶಾಸಕರೊಬ್ಬರ ಬಾಡಿಗೆ ಮನೆಯ ಬಾಗಿಲು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದ ನಗದು ಕಳವು ಮಾಡಿರುವ ಘಟನೆ ಇಲ್ಲಿನ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿತ್ರದುರ್ಗಕ್ಕೆ ಆಗಾಗ್ಗೆ ಬಂದು-ಹೋಗುತ್ತಿದ್ದರಿಂದ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು, ಹಲವು ವರ್ಷಗಳ ಹಿಂದೆ ದವಳಗಿರಿ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಗರಕ್ಕೆ ಬಂದಾಗ ಈ ಮನೆಯಲ್ಲೇ ತಂಗುತ್ತಿದ್ದರು. ಉಳಿದಂತೆ ಈ ಮನೆ ಬೀಗ ಹಾಕಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಶನಿವಾರ ಬೆಳಗ್ಗೆ ಈ ವಿಷಯ ತಿಳಿದ ಕೋಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News