ಆಡಂಕುದ್ರು ಬಳಿ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Update: 2019-04-21 10:27 GMT
ಮಂಗಳೂರು, ಎ. 21: ರಾ.ಹೆ. 66ರ ಕಲ್ಲಾಪು ಸಮೀಪದ ಆಡಂಕುದ್ರು ಬಳಿ ರವಿವಾರ ಮಧ್ಯಾಹ್ನ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಬಜಾಲ್ ನಿವಾಸಿ ಎಂದು ಗುರುತಿಸಲಾಗಿದ್ದು, ಹೆಸರು ತಿಳಿದು ಬಂದಿಲ್ಲ.
ತೊಕ್ಕೊಟ್ಟುನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಟ್ರಾಕ್ಟರ್ಗೆ ಬೈಕ್ ಢಿಕ್ಕಿ ಹೊಡೆಯಿತು. ಇದರಿಂದ ಬೈಕ್ ರಸ್ತೆಗೆ ಅಪ್ಪಳಿಸಿತಲ್ಲದೆ ಸವಾರ ಕೂಡ ರಸ್ತೆಗೆ ಎಸೆದಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಕೋಳಿ ಸಾಗಾಟದ ಲಾರಿ ಬೈಕ್ ಸವಾರನ ತಲೆಯ ಮೇಲೆ ಹರಿಯಿತು ಎನ್ನಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿದ್ದಾರೆ.