ಕಾರು ಅಪಘಾತ: ಯುವಕ ಸ್ಥಳದಲ್ಲೇ ಸಾವು

Update: 2019-04-21 11:57 GMT

ಮಡಿಕೇರಿ,ಎ.21: ನಿಯಂತ್ರಣ ತಪ್ಪಿದ ಕಾರೊಂದು ನಿಂತಿದ್ದ ಹಿಟಾಚಿ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೊನ್ನಂಪೇಟೆಯ ಜನತಾ ಕಾಲೋನಿ ಸಮೀಪದ ಬಾಳೆಲೆ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಎ.20 ರಂದು ತಡರಾತ್ರಿ ಈ ಘಟನೆ ನಡೆದಿದ್ದು, ಕಿರುಗೂರು ಗ್ರಾಮದ ಸುಬ್ರಮಣಿ ಎಂಬುವವರ ಪುತ್ರ ಕಾವೇರಪ್ಪ (27) ಮೃತ ವ್ಯಕ್ತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಕಾವೇರಪ್ಪ ತನ್ನ ಸಂಬಂಧಿಕರ ಮದುವೆಗೆಂದು ಆಗಮಿಸಿ ಹಿಂತಿರುಗುವ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News