ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ: ಎಚ್.ಆಂಜನೇಯ

Update: 2019-04-21 12:56 GMT

ಬಳ್ಳಾರಿ, ಎ.21: ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಇಬ್ಬರೂ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿದೆ ಎನ್ನುವುದಕ್ಕೆ ಇಂತಹ ಹೇಳಿಕೆಗಳೆ ಸಾಕ್ಷಿ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. 

ರವಿವಾರ ಹೊಸಪೇಟೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ್ ಕಾರಜೋಳ ಅಂಥವರು ಸಿಎಂ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಎನ್ನುವುದೆ ಇಲ್ಲ ಎಂದು ಹೇಳಿದರು. ನಾನು ಮತ್ತೆ ಸಿಎಂ ಆದರೆ ಹತ್ತು ಕೆ.ಜಿ.ಅಕ್ಕಿ ಕೊಡುಗೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾದರೆ ಬಿ.ಎಸ್.ಯಡಿಯೂರಪ್ಪನವರ ಡೈರಿ ವಿಷಯ ಬಹಿರಂಗಪಡಿಸುವೆ ಎಂದು ಶಿವಕುಮಾರ್ ಹೇಳಿದ್ದಾರೆ. ಇದರಲ್ಲಿ ಯಾವುದೆ ತಪ್ಪು ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News