ಬಳ್ಳಾರಿಯಲ್ಲಿ ಕಾಂಗ್ರೆಸ್, ಬಿಜೆಪಿ ಮುಖಂಡರ ಮನೆ ಮೇಲೆ ಐಟಿ ದಾಳಿ

Update: 2019-04-21 14:10 GMT

ಬಳ್ಳಾರಿ, ಎ.21: ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದರು.

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಸಂಬಂಧಿ ಯರ್ರಿಸ್ವಾಮಿ ಅವರ ಕಂಟೋನ್ಮೆಂಟ್ ಬಳಿಯಿರುವ ಮನೆ, ಇಲ್ಲಿನ ಗಾಂಧಿನಗರದಲ್ಲಿರುವ ಕೆಪಿಸಿಸಿ ಉಪಾಧ್ಯಕ್ಷ ಎನ್. ಸೂರ್ಯ ನಾರಾಯಣರೆಡ್ಡಿ ಅವರ ಕಚೇರಿ ಹಾಗೂ ನೆಹರು ಕಾಲೊನಿ ಯಲ್ಲಿರುವ ಮನೆಯಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದರು.

ಅದೇ ರೀತಿ, ತಾಳೂರು ರಸ್ತೆಯಲ್ಲಿರುವ ಬಿಜೆಪಿ ಶಾಸಕ ಜಿ.ಸೋಮಶೇಖರ ರೆಡ್ಡಿ ಆಪ್ತ ನರಸಿಂಹ ರೆಡ್ಡಿ ಅವರ ಮನೆ ಮತ್ತು ಶಾಸಕ ಬಿ.ಶ್ರೀರಾಮುಲು ಆಪ್ತ ಸಹಾಯಕ ರಾಜು ಅವರ ಅಹಂಬಾವಿ ಪ್ರದೇಶದ ಮನೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News