ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲು
Update: 2019-04-21 14:13 GMT
ರಾಯಚೂರು, ಎ.21 ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಬಿಜೆಪಿ ಶಾಸಕ ಶಿವನಗೌಡ ನಾಯಕ್ ವಿರುದ್ಧ ಇಲ್ಲಿನ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಾಸಕ ಶಿವನಗೌಡ ನಾಯಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಜೆಡಿಎಸ್ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗೆ ಇತ್ತೀಚಿಗೆ ದೂರು ಸಲ್ಲಿಸಿದ್ದರು.ಈ ಸಂಬಂಧ ಪ್ರಜಾ ಪ್ರತಿನಿಧಿ ಕಾಯ್ದೆ 135 ಹಾಗೂ ಐಪಿಸಿ ಸೆಕ್ಷನ್ 153(ಎ) ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚಿಗೆ ಸಿರವಾರದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಂಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ, ನಿಂದನೆ ರೀತಿಯಲ್ಲಿ ಮಾತನಾಡಿದ್ದರು. ಆನಂತರ ಅವರ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.