ದುಷ್ಕರ್ಮಿಗಳಿಂದ ಎಎಸ್ಸೈ ಮೇಲೆ ಹಲ್ಲೆ

Update: 2019-04-21 14:38 GMT

ಬೆಂಗಳೂರು, ಎ.21: ಬೈಕ್ ಕಳವು ಪ್ರಕರಣ ಸಂಬಂಧ ದುಷ್ಕರ್ಮಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಎಎಸ್ಸೈಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಹೊರ ವಲಯದ ಹೊಸೂರು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಚಂದಾಪುರ ಬಳಿ ಈ ಘಟನೆ ನಡೆದಿದ್ದು, ಎಎಸ್ಸೈ ಶಿವಲಿಂಗ ನಾಯ್ಕಿ ಎಂಬುವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇಲ್ಲಿನ ಕೀರ್ತನ ಹೋಟೆಲ್ ಬಳಿ ಬೈಕ್ ಕಳವು ಮಾಡುತ್ತಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ದುಷ್ಕರ್ಮಿಗಳನ್ನು ವಶಕ್ಕೆ ಪಡೆಯಲು ಪೋಲಿಸರು ಹೋಗಿದ್ದರು. ಈ ವೇಳೆ ತಪ್ಪಿಸಿಕೊಳ್ಳುವ ಬರದಲ್ಲಿ, ದುಷ್ಕರ್ಮಿಗಳು ಪೋಲಿಸರ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಹಲ್ಲೆಗೊಳಗಾದ ಎಎಸ್ಸೈ ಶಿವಲಿಂಗ ನಾಯ್ಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ, ಎರಡು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News