ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2019-04-21 16:40 GMT

ಹೆಬ್ರಿ, ಎ.21: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಸುಬ್ಬಣಕಟ್ಟೆ ಎಂಬಲ್ಲಿ ಎ.21ರಂದು ಬೆಳಗ್ಗೆ 8.40ರ ಸುಮಾರಿಗೆ ನಡೆದಿದೆ.

ಮೃತರನ್ನು ಮುದ್ರಾಡಿಯ ನಿತ್ಯಾನಂದ ಆಚಾರ್ಯರ ಮಗ ರಕ್ಷಣ್ ಆಚಾರ್ಯ(21) ಎಂದು ಗುರುತಿಸಲಾಗಿದೆ.

ಹೆಬ್ರಿ ಕಡೆಯಿಂದ ಮುದ್ರಾಡಿ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಎದುರಿನಿಂದ ಬರುತ್ತಿದ್ದ ಚಕ್ರ ಬಸ್ ಢಿಕ್ಕಿ ಹೊಡೆಯಿ ತ್ತೆನ್ನಲಾಗಿದೆ. ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಕ್ಷಣ್ ಹೆಬ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News