ಮುಹಮ್ಮದ್ ಮೊಹ್ಸಿನ್ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ವರ್ಗಾವಣೆ

Update: 2019-04-22 03:59 GMT

ಹೊಸದಿಲ್ಲಿ, ಎ.22: ಒಡಿಶಾದ ಸಂಬಲ್‌ಪುರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯ ಹೆಲಿಕ್ಟಾಪರ್ ಪರಿಶೀಲನೆ ಮಾಡಿದ್ದಾಕ್ಕಾಗಿ ಅಮಾನತುಗೊಂಡಿದ್ದ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಅಲ್ಲಿನ ಚುನಾವಣಾ ವೀಕ್ಷಕ ಮುಹಮ್ಮದ್ ಮೊಹ್ಸಿನ್ ಅವರನ್ನು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಗೆ ವರ್ಗಾಯಿಸಲಾಗಿದೆ.

ಮುಹಮ್ಮದ್ ಮೊಹ್ಸಿನ್ ಇನ್ನು ಮುಂದೆ ಬೆಂಗಳೂರಿನಲ್ಲಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯ ಕಚೇರಿಯಲ್ಲಿ ಇರುವವರು ಎಂದು ಕೇಂದ್ರ ಚುನಾವಣಾ ಆಯೋಗ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಪ್ರಧಾನಿ ಬಂದಿಳಿದ ಹೆಲಿಕಾಪ್ಟರ್ ಅನ್ನು ಪರಿಶೀಲಿಸುವಾಗ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಕಾರಣ ನೀಡಿ ಮೊಹ್ಸಿನ್ ಅವರನ್ನು ಇತ್ತೀಚೆಗೆ ಅಮಾನತುಗೊಳಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News