ಕಡಬ: ಕಾರು-ಬೈಕ್ ಮಧ್ಯೆ ಅಪಘಾತ; ನಾಲ್ಕು ಮಂದಿಗೆ ಗಾಯ

Update: 2019-04-22 11:39 GMT

ಕಡಬ, ಎ. 22: ಪಲ್ಸರ್ ಬೈಕ್ ಹಾಗೂ ಮಾರುತಿ 800 ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಸಮೀಪದ ದೇರಾಜೆ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

ಗಾಯಾಳುಗಳನ್ನು ಬೈಕ್ ಸವಾರ ಬಲ್ಯ ನಿವಾಸಿ ವಿಶ್ವಾಸ್ ಪ್ರಸಾದ್ ಹಾಗೂ ಕಾರಿನಲ್ಲಿದ್ದ ಕಡಬ ಸಮೀಪದ ಹಳೇಸ್ಟೇಶನ್ ನಿವಾಸಿಗಳಾದ ಅಬ್ರಹಾಂ(52), ಶಾಲಿ(50) ಮತ್ತು ಸಿಂಧು(40) ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್ ಇಬ್ಭಾಗವಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News