ಬಾಬರಿ ಮಸೀದಿ ಬಗ್ಗೆ ಹೇಳಿಕೆ: ಪ್ರಜ್ಞಾ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸಲು ಚುನಾವಣಾಧಿಕಾರಿ ಆದೇಶ

Update: 2019-04-22 15:37 GMT

ಹೊಸದಿಲ್ಲಿ, ಎ.22: ‘ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾದದ್ದಕ್ಕೆ ಹೆಮ್ಮೆಯಿದೆ’ ಎಂದು ಹೇಳಿಕೆ ನೀಡಿದ್ದಕ್ಕಾಗಿ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ಭೋಪಾಲ್ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಠಾಕೂರ್ ವಿರುದ್ಧ ಪ್ರಕರಣ ದಾಖಲಾಗಲಿದೆ. ಆಕೆಯ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಚುನಾವಣಾ ಅಧಿಕಾರಿಯೊಬ್ಬರು ಆದೇಶ ನೀಡಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ಪ್ರಜ್ಞಾ ಸಿಂಗ್, “1992ರಲ್ಲಿ ನಡೆದ ಬಾಬರಿ ಮಸೀದಿ ಧ್ವಂಸದಲ್ಲಿ ನಾನೂ ಭಾಗವಹಿಸಿದ್ದೆ ಮತ್ತು ಈ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಹೇಳಿದ್ದರು. ಇದಕ್ಕೂ ಮೊದಲು ಈಕೆ ಕರ್ಕರೆ ಬಗ್ಗೆ ನೀಡಿದ್ದ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು.

ವಿವಾದಾತ್ಮಕ ಹೇಳಿಕೆಗಳಿಗಾಗಿ ಚು,ಆಯೋಗವು ಪ್ರಜ್ಞಾಗೆ ನೋಟಿಸ್ ಜಾರಿಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News