ರಾಹುಲ್ ಗಾಂಧಿಗೆ ಬಾಂಬ್ ಕಟ್ಟಬೇಕು ಎಂದು ಬಿಜೆಪಿ ನಾಯಕಿ ಪಂಕಜಾ ಮುಂಢೆ

Update: 2019-04-22 16:10 GMT

ಮಹಾರಾಷ್ಟ್ರ, ಎ.22: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಾಂಬ್ ಕಟ್ಟಿ ಬೇರೊಂದು ದೇಶಕ್ಕೆ ಕಳುಹಿಸಬೇಕು ಎಂದು ಹೇಳುವ ಮೂಲಕ ಬಿಜೆಪಿ ನಾಯಕಿ, ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಢೆ ವಿವಾದ ಸೃಷ್ಟಿಸಿದ್ದಾರೆ.

“ನಮ್ಮ ಸೈನಿಕರ ಮೇಲೆ ಹೇಡಿಗಳ ದಾಳಿ ನಡೆದ ನಂತರ ನಾವು ಸರ್ಜಿಕಲ್ ಸ್ಟ್ರೈಕ್ ನಡೆಸಿದೆವು. ಸರ್ಜಿಕಲ್ ಸ್ಟ್ರೈಕ್ ಎಂದರೆ ಏನೆಂದು ಕೆಲವರು ಪ್ರಶ್ನಿಸುತ್ತಾರೆ. ಕೆಲವರು ಸಾಕ್ಷಿ ಕೇಳುತ್ತಾರೆ. ರಾಹುಲ್ ಗಾಂಧಿಗೆ ಬಾಂಬ್ ಕಟ್ಟಿ ಬೇರೊಂದು ದೇಶಕ್ಕೆ ಕಳುಹಿಸಬೇಕು. ಆಗ ಅವರಿಗೆ ಅರ್ಥವಾಗಬಹುದು” ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಪಂಕಜಾ ಮುಂಢೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News