ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-04-22 16:10 GMT

ಕುಂದಾಪುರ, ಎ.22: ಹೃದಯ ಸಂಬಂಧಿ ಖಾಯಿಲೆ ಮತ್ತು ಕಣ್ಣಿನ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೊಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ನಾಗೇಶ ದೇವಾಡಿಗ(60)ಎಂಬವರು ಎ.21ರ ಮಧ್ಯಾಹ್ನ 12ಗಂಟೆಯಿಂದ 22ರ ಬೆಳಗ್ಗೆ 11ಗಂಟೆ ಮದ್ಯಾವಧಿಯಲ್ಲಿ ಹಾಲಾಡಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮಾಸೆಬೈಲು:  ಹಲವು ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಮಡಾಮಕ್ಕಿ ನಡುಬೆಟ್ಟುವಿನ ಕೃಷ್ಣಯ್ಯ ಶೆಟ್ಟಿ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.21ರಂದು ಮನೆ ಸಮೀಪದ ಅಡಿಕೆ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News