ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ

Update: 2019-04-22 16:38 GMT

ಮಂಗಳೂರು, ಎ.22: ನೇತ್ರಾವತಿ ನದಿ ತೀರದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರನ್ನು ಕಂಕನಾಡಿ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಡೀಲ್ ಕಾರ್ಯಾಚರಣೆ ನಡೆಸಿ ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡರು. ಇವುಗಳ ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ದಕ್ಷಿಣ ಉಪವಿಭಾಗದ ಸಹಾಯಕ ಆಯುಕ್ತರ ನಿರ್ದೇಶನದ ಮೇರೆಗೆ ದಾಳಿ ನಡೆಸಿದ ಪೊಲೀಸರು ಬಳಿಕ ವಶಪಡಿಸಿಕೊಂಡ ಸೊತ್ತು ಗಳನ್ನು ಮುಂದಿನ ಕ್ರಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News