ಶ್ರೀ ಕ್ಷೇತ್ರ ಕದ್ರಿ ಬ್ರಹ್ಮಕಲಶೋತ್ಸವಕ್ಕೆ ಗೊನೆಮುಹೂರ್ತ
Update: 2019-04-22 16:46 GMT
ಮಂಗಳೂರು, ಎ.22: ಶ್ರೀ ಕ್ಷೇತ್ರ ಕದ್ರಿಯಲ್ಲಿ ಜರುಗಲಿರುವ ಬ್ರಹ್ಮಕಲಶ, ಮಹಾರುದ್ರಯಾಗ ಹಾಗೂ ಮಹಾದಂಡ ರುದ್ರಾಭಿಷೇಕದಿಂದ ಸರ್ವರಿಗೂ ಒಳಿತಾಗುವ ಮೂಲಕ ಲೋಕಕಲ್ಯಾಣವಾಗಲಿ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹಾಗೂ ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಶ್ರೀ ಕ್ಷೇತ್ರ ಕದ್ರಿಯಲ್ಲಿ ಬ್ರಹ್ಮಕಲಶೋತ್ಸವದ ಗೊನೆಮೂಹೂರ್ತ, ಚಪ್ಪರ ಮುಹೂರ್ತ ಹಾಗೂ ಮಹಾದಂಡ ಮುಹೂರ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕ್ಷೇತ್ರದ ತಂತ್ರಿಗಳಾದ ವಿಠಲದಾಸ ತಂತ್ರಿ, ಅಜಿತ್ ಕುಮಾರ್ ರೈ ಮಾಲಾಡಿ, ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಹರಿನಾಥ ಜೋಗಿ, ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷ ಗಣೇಶ ಶೆಟ್ಟಿ, ಸ್ವಾಗತ ಸಮಿತಿಯ ಅಧ್ಯಕ್ಷ ಸುಂದರ ಶೆಟ್ಟಿ, ಉದ್ಯಮಿ ರತ್ನಾಕರ ಜೈನ್, ಅಶೋಕ್ ಡಿ.ಕೆ., ಕಿರಣ್ ಜೋಗಿ, ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಮತ್ತಿತರರು ಪಾಲ್ಗೊಂಡಿದ್ದರು.