ಮೂಳೂರು: ಆಯುರ್ವೇದಿಕ್ ಚಿಕಿತ್ಸೆ ಅರ್ಧಕ್ಕೆ ಮೊಟಕುಗೊಳಿಸಿ ಸಿಎಂ ಬೆಂಗಳೂರಿಗೆ ದೌಡು

Update: 2019-04-23 12:59 GMT

ಉಡುಪಿ, ಎ.23: ಶ್ರೀಲಂಕಾದಲ್ಲಿ ನಡೆದ ಸರಣಿ ಸ್ಪೋಟ ಪ್ರಕರಣ ನನ್ನನ್ನು ತೀವ್ರವಾಗಿ ಘಾಸಿಗೊಳಿಸಿದೆ. ನಿನ್ನೆಯಿಂದ ನನಗೆ ಇದೇ ತಲೆಯಲ್ಲಿ ಕಾಡುತ್ತಿದೆ. ನನ್ನ ಆತ್ಮೀಯರು ಮರಣ ಹೊಂದಿದ್ದಾರೆ. ಹೀಗಾಗಿ ಆರೋಗ್ಯ ಸುಧಾರಿಸಲು ಆಯುರ್ವೇದಿಕ್ ಚಿಕಿತ್ಸೆಗೆಂದು ಉಡುಪಿಗೆ ಬಂದಿರುವ ನಾನು ತುರ್ತಾಗಿ ಬೆಂಗಳೂರಿಗೆ ಮರಳುತಿದ್ದೇನೆ ಎಂದು ರವಿವಾರದಿಂದ ಕಾಪು ಸಮೀಪದ ಮೂಳೂರಿನ ಸಾಯಿರಾಧ ಹೆರಿಟೇಜ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಅಪರಾಹ್ನ ಬೆಂಗಳೂರಿಗೆ ನಿರ್ಗಮಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಆಯುರ್ವೇದಿಕ್ ಚಿಕಿತ್ಸೆಗೆ ಐದು ದಿನ ಕಾಪು ವಿನಲ್ಲಿ ಉಳಿದುಕೊಳ್ಳಬೇಕೆಂದಿದ್ದೆ. ಆದರೆ ನಿನ್ನೆಯಿಂದ ನನಗೆ ನೋವನ್ನು ತಡೆದುಕೊಳ್ಳಲಾಗುತ್ತಿಲ್ಲ ಎಂದು ಎರಡೇ ದಿನಕ್ಕೆ ಪಂಚಕರ್ಮ ಚಿಕಿತ್ಸೆ ಮೊಟಕು ಗೊಳಿಸಿ ಬೆಂಗಳೂರಿಗೆ ವಾಪಾಸಾಗುತ್ತಿರುವುದಾಗಿ ಸಿಎಂ ನುಡಿದರು.

ಈ ಬಗ್ಗೆ ಈಗಾಗಲೇ ವೈದ್ಯರ ಜೊತೆ ಚರ್ಚೆ ಮಾಡಿದ್ದೇನೆ. ಇದೇ 27ರ ನಂತರ ಮತ್ತೆ ಉಡುಪಿಗೆ ಬರಲು ಸೂಚಿಸಿದ್ದಾರೆ. ಚಿಕಿತ್ಸೆ ಮುಂದೂಡಿ ಕರ್ತವ್ಯ ಮಾಡಲು ಹೊರಟಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News