ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2019-04-23 16:30 GMT

ಉಡುಪಿ, ಎ. 23: ಉಡುಪಿ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಬನ್ನಂಜೆ, ಕುದಿ, ಪೆರ್ಡೂರು, ಬೆಳ್ಳಂಪಳ್ಳಿ, ಗೋಳಿಯಂಗಡಿಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬ್ರಹ್ಮಾವರ ಮತ್ತು ಪಟ್ಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಗಳಲ್ಲಿ 5ರಿಂದ 10ರವರೆಗಿನ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ 1,2ಎ,3ಎ,3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರವರ್ಗ 1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷ ರೂ., ಪ್ರವರ್ಗ 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 44,500 ರೂ.ಒಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಆದಾಯದ ಮಿತಿ ಇರುವುದಿಲ್ಲ.

ನಿಲಯಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಜಾತಿ/ಆದಾಯ ಪ್ರಮಾಣ ಪತ್ರ, 2018-19ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕ ಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿ ರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಪಂನಿಂದ ಪಡೆದ ಪ್ರಮಾಣ ಪತ್ರ, 2 ಪೋಟೋಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿ ಅಥವಾ ಸಂಬಂಧ ಪಟ್ಟ ನಿಲಯದ ಮೇಲ್ವಿಚಾರಕರಿಗೆ ಮೇ 31ರ ಒಳಗೆ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಸಂಬಂಧ ಪಟ್ಟ ವಿದ್ಯಾರ್ಥಿ ನಿಲಯ, ಸ್ಥಳೀಯ ಗ್ರಾಪಂ ಕಚೇರಿ ಅಥವಾ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿಯಿಂದ ಪಡೆದು ಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿಯನ್ನು (ದೂ.ಸಂ: 0820-2520739) ಸಂಪರ್ಕಿಸು ವಂತೆ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News