ದ.ಕ.ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ

Update: 2019-04-24 12:45 GMT

ಮಂಗಳೂರು, ಎ.24: ದ.ಕ.ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆಯು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ದ.ಕ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ಎಂ.ರೈಯ ಉಪಸ್ಥಿತಿಯಲ್ಲಿ ಬುಧವಾರ ಜರುಗಿತು.

ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿರುವುದಕ್ಕೆ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿ ಚುನಾವಣೆಯ ಬಗ್ಗೆ ಬ್ಲಾಕ್ ಅಧ್ಯಕ್ಷರುಗಳಿಂದ ವಿವರಣೆ ಪಡೆದುಕೊಂಡರು.

ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಮತ್ತು ಗ್ರಾಮ ಮಟ್ಟದಲ್ಲಿ ಜಿಲ್ಲಾ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಮೂಲಕ ಪಕ್ಷದ ಕಾರ್ಯಕರ್ತರ ಸಭೆಯನ್ನು ಪ್ರತಿ ತಿಂಗಳು ಕರೆದು ಪಕ್ಷ ಸಂಘಟಿಸುವ ಬಗ್ಗೆ ಮಿಥುನ್ ಎಂ.ರೈ ಸಲಹೆ ನೀಡಿದರು. ಅಲ್ಲದೆ ಪ್ರತಿ ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯಲ್ಲಿ ಮತದಾರರನ್ನು ನೋಂದಾಯಿಸುವ ಕಾರ್ಯ ಆರಂಭಿಸಬೇಕು ಎಂದು ಬ್ಲಾಕ್ ಅಧ್ಯಕ್ಷರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಜೆ.ಅಬ್ದುಲ್ ಸಲೀಂ, ಬೇಬಿ ಕುಂದರ್, ವೆಲೇರಿಯನ್ ಸಿಕ್ಷೇರಾ, ಸುದೀಪ್ ಕುಮಾರ್ ಶೆಟ್ಟಿ, ಮುಹಮ್ಮದ್ ಬಡಗನ್ನೂರು, ಗಣೇಶ್ ಗೌಡ ಕೈಕುರ, ವಿಶ್ವಾಸ್ ಕುಮಾರ್ ದಾಸ್, ಸದಾಶಿವ ಶೆಟ್ಟಿ, ಸುರೇಂದ್ರ ಬಿ.ಕಂಬಳಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News