ಕಾಂಗ್ರೆಸ್ ಪಕ್ಷದಿಂದ ವಜಾ

Update: 2019-04-24 12:46 GMT

ಮಂಗಳೂರು, ಎ.24: ಮಂಗಳೂರು ಮಹಾ ನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಲ್ಲದೆ, ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಲ್ಲಿ ನೀಡಿರುವ ಹುದ್ದೆಗಳಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ವಜಾಗೊಳಿಸಿದ್ದಾರೆ ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News