ಮೋದಿಯತ್ತ ಬೆರಳು ತೋರಿಸಿದರೆ, ಕೈ ಕತ್ತರಿಸಲಾಗುವುದು ಎಂದ ಬಿಜೆಪಿ ವರಿಷ್ಠ !

Update: 2019-04-24 17:17 GMT

ಹೊಸದಿಲ್ಲಿ, ಎ. 24: ಪ್ರಧಾನಿ ನರೇಂದ್ರ ಮೋದಿ ಅವರತ್ತ ಯಾರಾದರೂ ಬೆರಳು ತೋರಿಸಿದರೆ, ಅವರ ಕೈಗಳನ್ನು ಕತ್ತರಿಸಲಾಗುವುದು ಎಂದು ಹೇಳುವ ಮೂಲಕ ಹಿಮಾಚಲ ಪ್ರದೇಶದ ಬಿಜೆಪಿ ವರಿಷ್ಠ ಸತ್ಪಾಲ್ ಸಿಂಗ್ ಸತ್ತಿ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ.

ಮಂಡಿ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುವ ಸಂದರ್ಭ ಅವರು ಈ ಹೇಳಿಕೆ ನೀಡಿದ್ದಾರೆ. ಸೋಲನ್ ಜಿಲ್ಲೆಯ ರಾಮಶೇಹರ್‌ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ನಿಂದನೀಯ ಭಾಷೆ ಬಳಸಿದ ಹಿನ್ನೆಲೆಯಲ್ಲಿ ಕಳೆದ ವಾರ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಸತ್ತಿಗೆ ಚುನಾವಣಾ ಆಯೋಗ ನಿಷೇಧ ಹೇರಿತ್ತು.

 ಭಂಜಾಲ್‌ನಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್ ಗಾಂಧಿ ಅವರನ್ನು ವೈಯಕ್ತಿಕವಾಗಿ ಟೀಕಿಸಿದ ಹಿನ್ನೆಲೆಯಲ್ಲಿ ಕೂಡ ಉನಾದ ಜಿಲ್ಲಾ ಚುನಾವಣಾ ಅಧಿಕಾರಿ ಸತ್ತಿಗೆ ಎಚ್ಚರಿಕೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News