ಪ್ರಧಾನಿ ಸುದ್ದಿಗೋಷ್ಟಿ ನಡೆಸಲ್ಲ ಎಂದ ಬಿಜೆಪಿ: ನಿಮಗದು ಸಾಧ್ಯವೇ ಇಲ್ಲ ಎಂದು ಕುಟುಕಿದ ಕಾಂಗ್ರೆಸ್

Update: 2019-04-24 17:29 GMT

ಹೊಸದಿಲ್ಲಿ, ಎ.24: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುದ್ದಿಗೋಷ್ಠಿ ನಡೆಸುತ್ತಾರೆಂಬ ಸುದ್ದಿಗಳನ್ನು ಬಿಜೆಪಿ ನಿರಾಕರಿಸಿದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ನಿಮಗದನ್ನು ಮಾಡಲು ಸಾಧ್ಯವೇ ಇಲ್ಲ’ ಎಂದಿದೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ಎ.26ರಂದು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದ ನಂತರ ಈ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಲೇಬೇಕಾಯಿತು. ನಾಮಪತ್ರ ಸಲ್ಲಿಸುವ ಸಲುವಾಗಿ ಪ್ರಧಾನಿ ಎ.25ರಿಂದ 26ರವರೆಗೆ ವಾರಣಾಸಿಗೆ ಆಗಮಿಸಲಿದ್ದಾರೆ.

2014ರಿಂದೀಚೆಗೆ ಒಂದೇ ಒಂದು ಸುದ್ದಿಗೋಷ್ಠಿ ನಡೆಸದ ಪ್ರಧಾನಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಲೇ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News