ರಮೇಶ್ ಮೈಯಲ್ಲಿ ಹರಿಯುತ್ತಿರುವುದು ಕಾಂಗ್ರೆಸ್ ರಕ್ತ: ದಿನೇಶ್ ಗುಂಡೂರಾವ್

Update: 2019-04-25 15:02 GMT

ಬೆಂಗಳೂರು, ಎ.25: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೈಯಲ್ಲಿ ಹರಿಯುತ್ತಿರುವುದು ಕಾಂಗ್ರೆಸ್ ರಕ್ತ. ಅವರ ಡಿಎನ್‌ಎ ಕಾಂಗ್ರೆಸ್‌ನದ್ದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಬಳಿಕ ಎಲ್ಲ ಗೊಂದಲಗಳಿಗೂ ಇತಿಶ್ರೀ ಬೀಳುತ್ತೆ. ಶಾಂತ ರೀತಿಯ ವಾತಾವರಣ ನಿರ್ಮಾಣವಾಗಲಿದೆ ಎಂದರು.

ರಮೇಶ್ ಜಾರಕಿಹೊಳಿಗೆ ಪಕ್ಷದ ಕೆಲವು ವಿಚಾರಗಳಿಂದ ನೋವಾಗಿರಬಹುದು. ಆದರೆ, ಪಕ್ಷ ಅವರಿಗೆ ಯಾವುದೇ ರೀತಿಯಲ್ಲಿ ಅನ್ಯಾಯ ಮಾಡಿಲ್ಲ. ಅವರನ್ನು ಅತ್ಯಂತ ಗೌರವಯುತವಾಗಿಯೇ ನಡೆಸಿಕೊಂಡಿದ್ದೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ವೈಯಕ್ತಿಕ ಕಾರಣಗಳಿಗಾಗಿ ರಮೇಶ್ ಜಾರಕಿಹೊಳಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರಬಹುದು. ಆದರೆ, ಯಾವುದೇ ಕಾರಣಕ್ಕೂ ಬಿಜೆಪಿಯವರ ಕುಮ್ಮಕ್ಕಿಗೆ ಒಳಗಾಗದೆ, ಅವರು ಉತ್ತಮ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ನಾನು ರಮೇಶ್ ಜಾರಕಿಹೊಳಿಗೆ ಸಮನಾದ ನಾಯಕನಲ್ಲ. ರಮೇಶ್ ನನಗೆ ಎರಡು ಏಟು ಹೊಡೆದು ಬಿಡಲಿ, ಆದರೆ ನನಗೇನೂ ಬೇಜಾರಿಲ್ಲ. ನಾವೆಲ್ಲರೂ ಒಂದೇ ಕುಟುಂಬದವರು, ಕುಟುಂಬದಲ್ಲಿ ಅಣ್ಣ ತಮ್ಮಂದಿರ ತಪ್ಪುಸಹಜ.

-ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News