ಮೋದಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಇ.ಸಿ. ನಿರ್ಲಕ್ಷ: ಮಾಯಾವತಿ

Update: 2019-04-25 16:24 GMT

ಹೊಸದಿಲ್ಲಿ, ಎ. 25: ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದನ್ನು ಚುನಾವಣಾ ಆಯೋಗ ನಿರ್ಲಕ್ಷಿಸಿದೆ ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಗುರುವಾರ ಆರೋಪಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಹೊರತಾಗಿಯೂ ಪ್ರಧಾನಿ ಮೋದಿ ಅವರು ಮುಕ್ತವಾಗಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಚುನಾವಣಾ ಆಯೋಗಕ್ಕೆ ಕೃತಜ್ಞತೆಗಳು ಎಂದು ಅವರು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ಹುದ್ದೆಗೆ ಪ್ರತಿಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ ಎಂದು ಹೇಳುವ ಮೂಲಕ ಬಿಜೆಪಿ ಹಾಗೂ ಕಂಪೆನಿ ಮತ್ತೆ ಮತ್ತೆ ಜನರನ್ನು ಅವಮಾನಿಸುತ್ತಿರುವುದು ಯಾಕೆ ? ಈ ಹಿಂದೆ ನೆಹರೂ ಅವರ ನಂತರ ಯಾರು ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಆದರೆ, ಜನರು ಇಂತಹ ಅಸಂಬದ್ಧ ಪ್ರಶ್ನೆಗೆ ಸೂಕ್ತ ಉತ್ತರ ನೀಡಿದ್ದರು. ಇಂದಿನ ಪ್ರಶ್ನೆಗೆ ಕೂಡ ಜನರು ಶೀಘ್ರದಲ್ಲಿ ಉತ್ತರಿಸಲಿದ್ದಾರೆ ಎಂದು ಮಾಯಾವತಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News