ಐಎನ್‍ಎಸ್ ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ: ನೌಕಾಪಡೆ ಅಧಿಕಾರಿ ಸಾವು

Update: 2019-04-26 12:07 GMT

ಕಾರವಾರ,ಎ.26: ಐಎನ್‍ಎಸ್ ವಿಕ್ರಮಾದಿತ್ಯದ ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಓರ್ವ ನೌಕಾಪಡೆ ಅಧಿಕಾರಿ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಐಎನ್‍ಎಸ್ ವಿಕ್ರಮಾದಿತ್ಯ ಇಂದು ಬೆಳಗ್ಗೆ ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ವೇಳೆ ನೌಕೆಯ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ವೇಳೆ ಲೆಫ್ಟಿನೆಂಟ್ ಕಮಾಂಡರ್ ಡಿಎಸ್ ಚೌವ್ಹಾಣ್ ಅವರು ಮೃತಪಟ್ಟಿದ್ದಾರೆ ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ. ಘಟನೆಯಲ್ಲಿ ಇತರೆ 7 ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನೌಕಾನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಚೌವ್ಹಾಣ್ ಅವರನ್ನು ಕೂಡಲೇ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ನೌಕಾಪಡೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News