ಲಾರಿ-ಬೈಕ್ ಮುಖಾಮುಖಿ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

Update: 2019-04-26 12:12 GMT

ವಿಜಯಪುರ,ಎ.26: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ಇಂದು ಮಧ್ಯಾಹ್ನ ನಡೆದಿದೆ. 

ಅಪಘಾತಕ್ಕೆ ಬೈಕ್ ನಲ್ಲಿದ್ದ ಬಾಳು ಪಾಂಡ್ರೆ (47) ಹಾಗೂ ಇನ್ನಿಬ್ಬರು ಮಹಿಳೆಯರು ಸ್ಥಳದಲ್ಲೆ ಅಸುನೀಗಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದ್ದು, ಘಟನೆ ಬಳಿಕ ಲಾರಿ ಸಮೇತ ಪರಾರಿಯಾಗಲೆತ್ನಿಸಿದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಬಂಧಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News