ಹಾಸನ: ಪೊಲೀಸ್ ವಶದಲ್ಲಿದ್ದ ಯುವಕ ಅನುಮಾನಸ್ಪದ ಸಾವು

Update: 2019-04-27 17:19 GMT

ಹಾಸನ,ಎ.27: ಕಳ್ಳತನ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಯುವಕನೋರ್ವ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಚನ್ನರಾಯಪಟ್ಟಣ ತಾಲೂಕು ಬೆಳಗುಲಿಯ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಅವಿನಾಶ್ (28) ಪೊಲೀಸ್ ವಶದಲ್ಲಿದ್ದಾಗ ಸಾವನ್ನಪ್ಪಿದ್ದಾನೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಚನ್ನರಾಯಪಟ್ಟಣ ನುಗ್ಗೆಹಳ್ಳಿ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆಯುವ ವೇಳೆ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಪೋಲೀಸರು ಹೇಳಿಕೆ ನೀಡಿದ್ದಾರೆ. ಆದರೆ ಇಪ್ಪತ್ತು ದಿನಗಳ ಹಿಂದೆಯೇ ಆತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ. ಅದನ್ನು ತಾಳಲಾರದೆ ಆತ ಮೃತಪಟ್ಟಿದ್ದಾನೆ. ಲಾಕಪ್ ಡೆತ್ ಪ್ರಕರಣ ಮುಚ್ಚಿ ಹಾಕಲು ಪೊಲೀಸರು ಅವಿನಾಶ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

ಅವಿನಾಶ್ ಸಾವು ಪ್ರಕರಣದ ವಿಚಾರವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಂಕನಹಳ್ಳಿ ಕೂಡು ಹಾಗೂ ಬೆಳಗುಲಿ ಗ್ರಾಮದಲ್ಲಿ ಕೆಎಸ್‍ಆರ್ ಪಿ ತಂಡವನ್ನು ನಿಯೋಜಿಸಿ ಭದ್ರತಾ ಕ್ರಮ ಕೈಗೊಂಡಿದ್ದಾರೆ. ಶವವನ್ನು ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷಗೆ ತರಲಾಗಿದ್ದು, ವರದಿ ಬಂದ ನಂತರ ಸಾವಿನ ಬಗ್ಗೆ ಸತ್ಯಾಂಶ ಹೊರಬರಬೇಕಾಗಿದೆ. ಸ್ಥಳದಲ್ಲಿ ವೃತ್ತ ನಿರೀಕ್ಷಕ ಸತ್ಯನಾರಾಯಣ್ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News