ದುಷ್ಕರ್ಮಿಗಳಿಂದ ಅಂಬೇಡ್ಕರ್ ಪ್ರತಿಮೆಗೆ ಹಾನಿ

Update: 2019-04-27 18:11 GMT

ಅಝಂಗಢ,ಎ.27: ಉತ್ತರಪ್ರದೇಶದ ಅಝಂಗಢ ಜಿಲ್ಲೆಯ ಬರ್ದಾ ಸಮೀಪ ದುಷ್ಕರ್ಮಿಗಳು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮಯನ್ನು ಹಾನಿಗೊಳಿಸಿದ್ದಾರೆ.

ಚೌಕ್ಲಿ ಗ್ರಾಮದಲ್ಲಿ ಶನಿವಾರ ಪ್ರತಿಮೆಗೆ ಹಾನಿ ಮಾಡಲಾಗಿದೆ. ಸ್ಥಳೀಯ ನಿವಾಸಿಗಳಿಗೆ ಶನಿವಾರ ಬೆಳಗ್ಗೆ ಅದು ಗಮನಕ್ಕೆ ಬಂದಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

 ಸ್ಥಳದಲ್ಲಿ ಉದ್ವಿಗ್ನತೆಯನ್ನು ತಡೆಯಲು ಸ್ಥಳೀಯ ಆಡಳಿವು ಸ್ಥಳದಲ್ಲಿ ಅಂಬೇಡ್ಕರ್ ಅವರ ನೂತನ ಪ್ರತಿಮೆಯನ್ನು ಸ್ಥಾಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದ್ದು, ಪ್ರತಿಮೆ ಹಾನಿಗೈದ ಶಂಕಿತರಿಗಾಗಿ ಶೋಧ ಕಾರ್ಯ ನಡೆಯುತ್ತಿದೆಯೆಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News