'ಸಮಾನ ಮನಸ್ಕ ಶಾಸಕರ ಸಭೆ' ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದು ಹೀಗೆ..

Update: 2019-04-28 13:26 GMT

ಬೆಂಗಳೂರು, ಎ.28: ಬಿಡಿಎ ಅಧ್ಯಕ್ಷ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಎ.30ರಂದು ಸಮಾನ ಮನಸ್ಕ ಶಾಸಕರ ಸಭೆಯನ್ನು ಒಳ್ಳೆಯ ಉದ್ದೇಶಕ್ಕೆ ಕರೆದಿರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಹಿಟ್ಲರ್ ಮಾದರಿಯ ಆಡಳಿತವಲ್ಲ. ಎಲ್ಲರಿಗೂ ಮುಕ್ತ ಸ್ವಾತಂತ್ರವಿದೆ. ಸೋಮಶೇಖರ್ ಯಾವ ಕಾರಣಕ್ಕೆ ಶಾಸಕರ ಸಭೆ ಕರೆದಿದ್ದಾರೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕನಿಷ್ಠ 20 ಸ್ಥಾನ ಗೆಲ್ಲುವ ಭರವಸೆ ಇದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರ ನಾಯಕರೆಲ್ಲ ಸೇರಿ ಚರ್ಚೆ ಮಾಡಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಮಾಧ್ಯಮಗಳಲ್ಲಿ ಮಾತ್ರ ನರೇಂದ್ರ ಮೋದಿ ಪರ ಅಲೆಯಿದೆ. ಆದರೆ, ವಾಸ್ತವ ಪರಿಸ್ಥಿತಿ ಕಾಂಗ್ರೆಸ್ ಪರವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ದಿನ ಎಲ್ಲರಿಗೂ ಇದರ ಸತ್ಯ ತಿಳಿಯಲಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News