ಉದ್ಯಮಿ ಮನೆಯಲ್ಲಿ ನಗದು, ಚಿನ್ನಾಭರಣ ಕಳವು

Update: 2019-04-28 16:41 GMT

ಬೆಂಗಳೂರು, ಎ.28: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ನಗದು ಸೇರಿ ಚಿನ್ನಾಭರಣ ಕಳವು ಮಾಡಿರುವ ದುರ್ಘಟನೆ ಇಲ್ಲಿನ ಜೆಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜೆಸಿ ನಗರದ ಜಯನಗರ ಮಿಟಿಟ್ಟಲ್ ಅಪಾರ್ಟ್‌ಮೆಂಟ್‌ನಲ್ಲಿರುವ ಉದ್ಯಮಿ ಸಚಿನ್ ಭರತ್ ಅವರು ಕುಟುಂಬದವರೊಂದಿಗೆ ಕಳೆದ ಎ.8ರಂದು ವಿದೇಶ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ಬೆಳಕಿಗೆ ಬಂದಿದೆ.

ಈ ಸಂಬಂಧ ಜೆಸಿ ನಗರ ಪೊಲೀಸ್ ಠಾಣೆಗೆ ಸಚಿನ್ ದೂರು ನೀಡಿದ್ದು, ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News