ಸಿಡಿಲು ಬಡಿದು ಹಸು ಸಾವು

Update: 2019-04-29 14:37 GMT

ಹನೂರು,ಎ.29: ಗಾಳಿ ಮಳೆ ಸಿಡಿಲಿಗೆ ಹಸುವೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಕೌದಳ್ಳಿ ಸಮೀಪ ನಡೆದಿದೆ.

ಹನೂರು ತಾಲೂಕಿನ ಕೌದಳ್ಳಿ ಸಮೀಪದ ಗುರುಸ್ವಾಮಿ ದೊಡ್ಡಿ ಗ್ರಾಮದ ಕುಮಾರ್ ಎಂಬುವರಿಗೆ ಸೇರಿದ ಹಸು ಸಿಡಿಲಿಗೆ ಹಸುವೊಂದು ಸಾವನ್ನಪ್ಪಿದೆ. ಕುಮಾರ್ ಎಂದಿನಂತೆ ತಮ್ಮ ಜಮೀನಿನ ಕೊಟ್ಟಿಗೆಯಲ್ಲಿ ಹಸುವನ್ನು ಕಟ್ಟಿದ್ದರು. ಸೋಮವಾರ ಸಂಜೆ ಸುರಿದ ಸಿಡಿಲು ಸಹಿತ ಧಾರಾಕಾರ ಮಳೆಗೆ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ.

ಹೈನುಗಾರಿಕೆಯಿಂದ ಜೀವನ ನಿರ್ವಹಿಸುತ್ತಿದ್ದ ಕುಮಾರ್ ಇದೀಗ ಕಂಗಾಲಾಗಿದ್ದು, ಸರ್ಕಾರದಿಂದ ದೊರೆಯುವ ಪರಿಹಾರವನ್ನು ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News