ಬಸ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
Update: 2019-04-29 22:02 IST
ಉಡುಪಿ, ಎ.29: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತ ಪಟ್ಟ ಘಟನೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದಲ್ಲಿ ಎ.29ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಕಟಪಾಡಿಯ ಸುಶೀಲ ಶೇರಿಗಾರ್(65) ಎಂದು ಗುರುತಿಸ ಲಾಗಿದೆ. ಅಂಬಲಪಾಡಿಯಲ್ಲಿರುವ ಮಗಳ ಮನೆಗೆ ಬಂದಿದ್ದ ಸುಶೀಲ ಶೇರಿಗಾರ್, ಕಟಪಾಡಿಗೆ ಹೋಗಲು ಅಂಬಲಪಾಡಿಯಲ್ಲಿ ಬಸ್ನಲ್ಲಿ ಹೊರಟು ಸರ್ವಿಸ್ ಬಸ್ ನಿಲ್ದಾಣದಲ್ಲಿ ಇಳಿದರು. ನಂತರ ಅವರು ಬಸ್ಸಿನ ಎದುರು ಬದಿಯಿಂದ ರಸ್ತೆಯನ್ನು ದಾಟುತ್ತಿರುವಾಗ ಬಸ್ ಚಾಲಕ ನಿರ್ಲಕ್ಷತನದಿಂದ ಚಲಾಯಿಸಿದ ಪರಿಣಾಮ ಬಸ್ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 12:13ರ ಸುಮಾರಿಗೆ ಮೃತಪಟ್ಟ ರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.