ಬ್ಯಾಂಕ್ ವಂಚನೆ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ನಿವಾಸಕ್ಕೆ ಸಿಬಿಐ ದಾಳಿ
Update: 2019-04-30 17:28 GMT
ಹೈದರಾಬಾದ್,ಎ.30: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಜಗನ್ ಮೋಹನ್ ರೆಡ್ಡಿಯ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ಮಾಧ್ಯಮ ವರದಿಗಳ ಪ್ರಕಾರ, ಆಂಧ್ರ ಪ್ರದೇಶದ ನರಸಪುರಂ ಲೋಕಸಭಾ ಕ್ಷೇತ್ರದ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ರಘುರಾಮ ಕೃಷ್ಣಂ ರಾಜು ಅವರ ಹೈದರಾಬಾದ್ನಲ್ಲಿರುವ ಎರಡು ಮನೆ ಮತ್ತು ನಾಲ್ಕು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ರಘುರಾಮ ಕಳೆದ ವರ್ಷ ತೆಲುಗು ದೇಶಂ ಪಕ್ಷವನ್ನು ತೊರೆದ ನಂತರ ವೈಎಸ್ಆರ್ ಕಾಂಗ್ರೆಸ್ ಸೇರಿದ್ದರು. ಸದ್ಯ 2,655 ಕೋಟಿ ರೂ. ಬ್ಯಾಂಕ್ ವಂಚನೆ ಆರೋಪದಲ್ಲಿ ಸಿಬಿಐ ರಘುರಾಮ ಅವರ ಆಸ್ತಿಗಳ ಮೇಲೆ ದಾಳಿ ನಡೆಸಿದೆ.
ಈ ತಿಂಗಳ ಆರಂಭದಲ್ಲಿ ಡಿಎಂಕೆ ನಾಯಕಿ ಕನಿಮೊಳಿಯವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಸಿಬಿಐ ದಾಖಲೆಗಳನ್ನು ಪರಿಶೀಲಿಸಿತ್ತು.