ಗಂಭೀರ್ ಗೆ ಚುನಾವಣಾಧಿಕಾರಿಯಿಂದ ಶೋಕಾಸ್ ನೋಟಿಸ್

Update: 2019-05-01 07:15 GMT

ಹೊಸದಿಲ್ಲಿ, ಮೇ 1: ಮಾಜಿ ಕ್ರಿಕೆಟಿಗ ಹಾಗೂ ದಿಲ್ಲಿ ಪೂರ್ವ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಗೆ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಕ್ಷೇತ್ರದ ಚುನಾವಣಾಧಿಕಾರಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ರಾಷ್ಟ್ರೀಯ ದೈನಿಕದಲ್ಲಿ  ತನ್ನ ಜಾಹೀರಾತು ಪ್ರಕಟಿಸುವ ಮೂಲಕ ಮಾದರಿಯ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದಾಗಿ  ಅಧಿಕಾರಿಗಳು ಶೋಕಾಸ್ ನೋಟಿಸ್  ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News