ಬಾಬರಿ ಮಸೀದಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಪ್ರಜ್ಞಾ ಸಿಂಗ್ ಪ್ರಚಾರಕ್ಕೆ 3 ದಿನಗಳ ಕಾಲ ನಿಷೇಧ

Update: 2019-05-01 15:35 GMT

ಹೊಸದಿಲ್ಲಿ, ಮೇ 1: ಬಾಬರಿ ಮಸೀದಿ ಧ್ವಂಸದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ, ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಗೆ ಚುನಾವಣಾ ಆಯೋಗ ಪ್ರಚಾರದಿಂದ 72 ಗಂಟೆಗಳ ಕಾಲ ನಿಷೇಧ ಹೇರಿದೆ.

ಗುರುವಾರ ಬೆಳಗ್ಗೆ 6 ಗಂಟೆಯಿಂದ ನಿಷೇಧದ ಅವಧಿ ಆರಂಭವಾಗಲಿದೆ.  ಸಂದರ್ಶನವೊಂದರಲ್ಲಿ ಮಾತನಾಡಿದ್ದ ಪ್ರಜ್ಞಾ ಸಿಂಗ್, “ಬಾಬರಿ ಮಸೀದಿಯನ್ನು ನಾವು ದ್ವಂಸಗೈದಿದ್ದೆವು. ಈ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News