ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ; ಓರ್ವ ಮೃತ್ಯು, ಮೂವರಿಗೆ ಗಾಯ

Update: 2019-05-03 10:10 GMT

ತುಮಕೂರು, ಮೇ 3: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಬಿದರೇಗುಡಿ ಸಮೀಪದ ಬೈರಾಪುರ ಗೇಟ್ ಬಳಿ ಇಂದು ನಡೆದಿದೆ.

ಮೃತರನ್ನು ದ್ವಿಚಕ್ರ ವಾಹನ ಸವಾರ ಅರಸೀಕೆರೆ ತಾಲೂಕಿನ ಸಲಪರ ಹಳ್ಳಿ ನಿವಾಸಿ ಪರಮೇಶ್ ಎಂದು ಗುರುತಿಸಲಾಗಿದೆ. ಸಹಸವಾರರಾಗಿದ್ದ ಪರಮೇಶ್ ಅವರ ಪತ್ನಿ ಮಂಜುಳಾ, ಮಕ್ಕಳಾದ ಚೇತನ್ ಹಾಗೂ ಸೌಂದರ್ಯಾ ಗಂಭೀರ ಗಾಯಗೊಂಡಿದ್ದಾರೆ.

ಅರಸೀಕೆರೆಯಿಂದ ತಿಪಟೂರಿಗೆ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿರುವ ಮೂವರನ್ನು ತಿಪಟೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಬಗ್ಗೆ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News