ಕುಸುಮಾ ಶಿವಳ್ಳಿಗೆ ಸಂಪೂರ್ಣ ಬೆಂಬಲ: ಡಾ.ಬಿ.ಪುಷ್ಪಾ ಅಮರನಾಥ್

Update: 2019-05-03 14:19 GMT

ಹುಬ್ಬಳ್ಳಿ, ಮೇ 3: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ನಮಗೆ ಅತ್ಯಂತ ಮಹತ್ವದಾಗಿದ್ದು, ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿಗೆ ಮಹಿಳಾ ಕಾಂಗ್ರೆಸ್ ಘಟಕದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂದಗೋಳ ಕ್ಷೇತ್ರದಲ್ಲಿ ಕುಸುಮಾ ಶಿವಳ್ಳಿ ಗೆಲುವು ನಿಶ್ಚಿತ. ಈ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಒಲವು ಕುಸುಮಾ ಪರವಾಗಿದೆ ಎಂದರು.

ಬಿಜೆಪಿಯವರು ಕೇವಲ ಜನರನ್ನು ಮರುಳು ಮಾಡುವ ಮೂಲಕ ಮತಯಾಚಿಸುತ್ತಿದ್ದಾರೆ. ಸ್ವಾತಂತ್ರ ಬಂದಾಗಿನಿಂದಲೂ ದೇಶಕ್ಕೆ ಬಿಜೆಪಿಯವರು ನೀಡಿರುವ ಕೊಡುಗೆ ಏನು? ನಮ್ಮ ರಾಜ್ಯಕ್ಕೆ ಬಿಜೆಪಿ ನಾಯಕರು ಕೊಟ್ಟಿರುವ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News