ಶಾಸಕನ ಬಳಿ ಹಣಕ್ಕೆ ಬೇಡಿಕೆ ಆರೋಪ: ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಸೆರೆ

Update: 2019-05-05 15:04 GMT

ಬೆಂಗಳೂರು, ಮೇ 5: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬೆದರಿಸಿ ಹಣಕ್ಕೆ ಬೇಟಿಕೆಯಿಟಿದ್ದ ಕನ್ನಡ ಖಾಸಗಿ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಹೇಮಂತ್‌ ಕುಮಾರ್ ಕಮ್ಮಾರ (40) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರವಿವಾರ ಇಲ್ಲಿನ ಖಾಸಗಿ ಸುದ್ದಿ ವಾಹಿನಿಯ ಕಚೇರಿಯಲ್ಲಿಯೇ ಆರೋಪಿಯನ್ನು ಬಂಧಿಸಲಾಯಿತು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?: ವಿಡಿಯೋ ಇರುವುದಾಗಿ ಹೇಳಿ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬೆದರಿಸುತ್ತಿದ್ದ ಆರೋಪಿ, ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ಈ ಸಂಬಂಧ ಶಾಸಕರ ಆಪ್ತ ಸಹಾಯಕ ಗಿರೀಶ್ ಭಾರದ್ವಾಜ್ ಎಂಬುವರು ಇಲ್ಲಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.

ಈ ದೂರಿನಡಿ ಆರೋಪಿಯನ್ನು ಬಂಧಿಸಲಾಗಿದೆ. ಆತನ ಮನೆ ಹಾಗೂ ಕಚೇರಿ ಮೇಲೆಯೂ ದಾಳಿ ನಡೆಸಲಾಗಿದೆ. ಲ್ಯಾಪ್‌ಟಾಪ್, ಸಿ.ಡಿ ಹಾಗೂ ಹಲವು ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News