ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Update: 2019-05-05 13:30 GMT

ಮಂಡ್ಯ, ಮೇ 5: ರಾಮನಗರ ಸಮೀಪ ರಸ್ತೆ ಅಪಘಾತದಲ್ಲಿ ಮಂಡ್ಯ ಜಿಲ್ಲೆ ಬಸರಾಳು ತಾಲೂಕು ಸಿದ್ದೇಗೌಡನಕೊಪ್ಪಲು ಗ್ರಾಮದ ನಾಗರಾಜು ಎಂಬುವರು ಸಾವನ್ನಪ್ಪಿದ್ದಾರೆ.

ರವಿವಾರ ಮಂಡ್ಯದಿಂದ ಬೆಂಗಳೂರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಸುಮಾರು ರಾತ್ರಿ 8 ಗಂಟೆ ಸಮಯದಲ್ಲಿ ಅಪಘಾತವಾಗಿ ತೀವ್ರವಾಗಿ ಗಾಯಗೊಂಡ ಅವರನ್ನು ಹತ್ತಿರದ ರಾಜರಾಜೇಶ್ವರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಾಗರಾಜ್ ಬೆಂಗಳೂರಿನ ಬಾರೊಂದರಲ್ಲಿ ಕ್ಯಾಷಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಮಲ ನಗರದಲ್ಲಿ ವಾಸಿಸಿದ್ದರು. ಸಹೋದರನ ಮಗಳ ಮದುವೆಗೆ ಗ್ರಾಮಕ್ಕೆ ಆಗಮಿಸಿದ್ದ ಅವರು, ನಂತರ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News