ಜೂಜಾಟ: 10 ಮಂದಿಯ ಬಂಧನ

Update: 2019-05-05 16:27 GMT

ಬೆಂಗಳೂರು, ಮೇ 5: ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪ ಸಂಬಂಧ ಸಿಸಿಬಿ ಪೊಲೀಸರು ಹತ್ತು ಜನರನ್ನು ಬಂಧಿಸಿ, 37 ಸಾವಿರ ರೂ. ನಗದು ಜಪ್ತಿ ಮಾಡಲಾಗಿದೆ.

ನಗರದ ಸಿಕೆಸಿ ಗಾರ್ಡನ್, 4ನೇ ಕ್ರಾಸ್‌ನ ಮನೆಯೊಂದರಲ್ಲಿ ಕೆಲವರು ಹಣ ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಿಸಿಬಿ ತಿಳಿಸಿದೆ.

ಬಂಧಿತರಿಂದ ಜೂಜಾಟಕ್ಕೆ ಸಂಬಂಧಿಸಿದ ಒಟ್ಟು 37 ಸಾವಿರ ರೂ. ನಗದು, ಬೆಡ್‌ಶೀಟ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಿ ಇಲ್ಲಿನ ಎಸ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News