ಹನೂರು: ಕಾಂಗ್ರೆಸ್, ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಸೇರ್ಪಡೆ

Update: 2019-05-06 16:19 GMT

ಹನೂರು,ಮೇ 6: ಹನೂರು ಪಟ್ಟಣದ ವಿವಿಧ ವಾರ್ಡ್‍ನ ಕಾಂಗ್ರೆಸ್ ಮತ್ತು ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹನೂರು ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆಯಾದ ಹಿನ್ನೆಲೆ ಪಕ್ಷದ ಕಚೇರಿಯ ಮುಂಭಾಗ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಜೆಡಿಎಸ್ ಮುಖಂಡ ಮಂಜುನಾಥ್‍, ಪಕ್ಷದ ಕಾರ್ಯಕರ್ತರ ಸಲಹೆ ಸೂಚನೆಯ ಮೇರೆಗೆ ಎಲ್ಲಾ ವಾರ್ಡ್‍ಗಳಲ್ಲೂ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಪ್ರತಿಯೊಬ್ಬರೂ ಒಮ್ಮತದಿಂದ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜಶೇಖರಮೂರ್ತಿ, ಸಿದ್ದೇಗೌಡ, ಪುಟ್ಟಸ್ವಾಮಿ ಗೌಡ, ಕಿರಣ್, ಮಂಜೇಶ್, ಆನಂದ್ ಲೋಕೇಶ್, ನಾಗೇಂದ್ರಬಾಬು, ರಾಜೇಶ್ ಬಸವರಾಜು, ಮಹೇಶ್, ಪ್ರಸನ್ನ, ನಂಜಯ್ಯ, ಪಿಜಿಪಾಳ್ಯ ಗ್ರಾಪಂ ಉಪಾಧ್ಯಕ್ಷ ಸಿದ್ದರಾಜು ಸೇರಿದಂತೆ ಹಲವರು ಹಾಜರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News