ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸಾ.ರಾ.ಮಹೇಶ್

Update: 2019-05-06 16:38 GMT

ಮೈಸೂರು,ಮೇ.6: ಲೋಕಸಭಾ ಚುನಾವಣೆಗೆ ಮೈಸೂರಿನಲ್ಲಿ ಜೆ.ಡಿ.ಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಸಾ.ರಾ ಮಹೇಶ್, ಜಿ.ಟಿ.ದೇವೇಗೌಡರು ಅವರಿಗಿರುವ ಮಾಹಿತಿ ಮೇರೆಗೆ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ. ಆದರೆ ಸಚಿವ ಜಿ.ಟಿ ದೇವೇಗೌಡರು ಒಂದು ಬೂತ್ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಇಡೀ ಲೋಕಸಭಾ ವ್ಯಾಪ್ತಿಯಲ್ಲಿ ನಾಯಕರು ತೀರ್ಮಾನಿಸಿದಂತೆ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿದ್ದೇವೆ. ಮಂಡ್ಯದಲ್ಲಿ ನಾವು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ. ಮೈಸೂರಿನಲ್ಲಿ ಮತಗಳ ಅಂತರ ಕಡಿಮೆಯಾಗುತ್ತೆ. ಆದರೆ ನಾವು ಇಲ್ಲಿಯೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು  ಫ್ರೆಂಡ್ಲಿ ಫೈಟ್ ಮಾಡಲಿದ್ದೇವೆ. ಎರಡು ಪಕ್ಷದಲ್ಲೂ ಗೆದ್ದವರು ಸೋತವರು ಇದ್ದಾರೆ. ಚುನಾವಣೆಗಾಗಿ ಇಬ್ಬರು ತಯಾರಿ ಮಾಡಿಕೊಂಡಿದ್ದಾರೆ. ನಾವು ಹೊಂದಾಣಿಕೆ ಮಾಡಿಕೊಂಡರೆ ಬೇರೆ ಪಾರ್ಟಿ ಬಾಗಿಲಿಗೆ ಹೋಗುತ್ತಾರೆ. ಇಲ್ಲವೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರೆ. ಈ ಕಾರಣದಿಂದ ನಾವು ಫ್ರೆಂಡ್ಲಿ ಫೈಟ್ ಮಾಡುತ್ತೇವೆ. ಹೀಗಾಗಿ ಸ್ಥಳೀಯ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಕಷ್ಟ. ಒಂದು ವೇಳೆ ವರಿಷ್ಠರು ತೀರ್ಮಾನ ಮಾಡಿದರೆ ಹೊಂದಾಣಿಕೆಯಾಗುತ್ತದೆ ಎಂದು ಸಚಿವ ಸಾ.ರಾ. ಮಹೇಶ್ ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News